Loading the player...


INFO:
ತುಮಕೂರು : ಬಿಜೆಪಿ ಹೈಕಮಾಂಡ್ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ವಿಜಯೇಂದ್ರ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಮಾಡಿಕೊಡಲಿದೆ ಎಂದು ಸಚಿವ ಸುಧಾಕರ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಎಲ್ಲಿ ಕೊಡಬೇಕು ಎಂಬುದನ್ನು ಹೈ ಕಮಾಂಡ್ ನಿರ್ಧರಿಸಲಿದೆ. ವಿಜಯೇಂದ್ರ ಕೂಡ ಉದಯೋನ್ಮುಖ ರಾಜಕಾರಣಿ ಮತ್ತು ನಾಯಕರಾಗಿದ್ದಾರೆ ಎಂದು ಹೇಳಿದ್ದಾರೆ.
ವಿಜಯೇಂದ್ರ ಅವರಿಗೂ ಚುನಾವಣೆಯಲ್ಲಿ ಸ್ಪರ್ಧಿಸಲು ಹೈಕಮಾಂಡ್ ಅವಕಾಶ ಮಾಡಿಕೊಡಲಿದೆ : ಸಚಿವ ಸುಧಾಕರ್